ಬೆಂಗಳೂರು: ಅಪರಾಧ ಕೃತ್ಯ ಎಸಗಲು ಮಾರಕಾಸ್ತ್ರಗಳ ಸಮೇತ ಸಜ್ಜಾಗಿದ್ದ ರೌಡಿಗಳು ಸೇರಿ ಆರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಚಾಮರಾಜಪೇಟೆ ರೌಡಿ ವಿನೋದ್ ಅಲಿಯಾಸ್ ಮನ್ನಾ, ಮನ್ಸೂರ್, ಪಾಪ ರೆಡ್ಡಿ ಸೇರಿದಂತೆ ಆರು ಮಂದಿ ಗ್ಯಾಂಗ್ ಕಟ್ಟಿಕೊಂಡಿದ್ದರು. ಅಪರಾಧ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮಾಹಿತಿ ಬಂದಿತ್ತು. ಕಾರ್ಯಾಚರಣೆ ಕೈಗೊಂಡು ಅವರನ್ನು ಬಂಧಿಸಲಾಗಿದೆ. ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸ್ ಮೂಲಗಳು ಹೇಳಿವೆ.
‘ಬಂಧಿತರ ಪೈಕಿ ನಾಲ್ವರ ಹೆಸರು, ಕಲಾಸಿಪಾಳ್ಯ ಹಾಗೂ ಚಾಮರಾಜಪೇಟೆ ರೌಡಿ ಪಟ್ಟಿಯಲ್ಲಿದೆ. ಕೆಲ ಆರೋಪಿಗಳು, ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದರು. ತಮ್ಮದೇ ಗ್ಯಾಂಗ್ ಕಟ್ಟಿಕೊಂಡು ಹಣಕ್ಕಾಗಿ ಸಾರ್ವಜನಿಕರನ್ನು ಪೀಡಿಸುತ್ತಿದ್ದರು. ಜೀವ ಬೆದರಿಕೆ ಹಾಕಿ ಸುಲಿಗೆ ಮಾಡುತ್ತಿದ್ದರು’ ಎಂದೂ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.