ADVERTISEMENT

ಶೂಟ್​ ಮಾಡುವುದಾಗಿ ಬೆದರಿಸಿ ಕಾರು, ಹಣ  ದೋಚಿದ ದುಷ್ಕರ್ಮಿಗಳು

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 8:25 IST
Last Updated 21 ಜನವರಿ 2020, 8:25 IST
ಪೊಲೀಸರು ವಶಪಡಿಸಿಕೊಂಡಿರುವ ಕಾರು
ಪೊಲೀಸರು ವಶಪಡಿಸಿಕೊಂಡಿರುವ ಕಾರು   

ಬೆಂಗಳೂರು: ದುಷ್ಕರ್ಮಿಗಳು ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಶೂಟ್​ ಮಾಡುವುದಾಗಿ ಬೆದರಿಸಿ ಹಣದ ದೋಚಿರುವ ಘಟನೆ ನೆಲಗೆದರನಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ.

ಅಮೆಜಾನ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್​ ಎಂಬವರು ರಾತ್ರಿ ಪಾಳಿ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಇಟಿಯೋಸ್​ ಕಾರ್​ನಲ್ಲಿ ಬಂದ ದುಷ್ಕರ್ಮಿಗಳು ಗಿರೀಶ್​​ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಗಿರೀಶ್ ಅವರನ್ನು ಕಾರಿನಿಂದ ಕೆಳಗಿಳಿಸಿ ಹಣೆಗೆ ಗನ್​ ಇಟ್ಟು ಶೂಟ್​ ಮಾಡುವುದಾಗಿ ಬೆದರಿಸಿದ್ದಾರೆ. ಜತೆಗೆ ಹಲ್ಲೆ ಕೂಡ ನಡೆಸಿದ್ದಾರೆ. ಅವರ ಬಳಿ ಇದ್ದ ಕಾರು, ಹಣ, ಮೊಬೈಲ್​ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾರೆ.

ಸ್ಥಳೀಯರ ಸಹಾಯದಿಂದ ಗಿರೀಶ್ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೀಣ್ಯ ಮತ್ತು ರಾಜಗೋಪಾಲನಗರ ಪೊಲೀಸರು ಆರೋಪಿಗಳನ್ನು ಹಿಂಬಾಲಿಸಿದ್ದಾರೆ. ಕಾರನ್ನು ಹೆಸರಘಟ್ಡ ಬಳಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ, ಕಾನ್‌ಸ್ಟೆಬಲ್ ಶ್ರೀನಿವಾಸ್ ಮತ್ತು ಶಂಭುಲಿಂಗಮೂರ್ತಿ ಅವರಿಗೆ ಸಣ್ಞಪುಟ್ಟ ಗಾಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.