ಬೆಂಗಳೂರು: ಉಪಚುನಾವಣೆ ಸಮೀಪಿಸುತ್ತಿರುವಂತೆಯೇ, ಅನರ್ಹ ಶಾಸಕರ ಆತಂಕವೂ ಹೆಚ್ಚುತ್ತಿದ್ದು, ಟಿಕೆಟ್ ನೀಡುವಾಗ ತಮ್ಮನ್ನು ಎಲ್ಲಿ ಕಡೆಗಣಿಸಲಾಗುತ್ತದೋ ಎಂಬ ಚಿಂತೆಯಲ್ಲಿದ್ದಾರೆ. ಹೀಗಾಗಿ ಶನಿವಾರ ಬೆಳಿಗ್ಗೆ ಮೂವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದರು.
ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಜತೆಗೆ ಮುನಿರತ್ನ, ಕೆ.ಆರ್.ಪುರಂ ಕ್ಷೇತ್ರದ ಭೈರತಿ ಬಸವರಾಜ್ ಮತ್ತು ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಗೋಪಾಲಯ್ಯ ಅಳಲು ತೋಡಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.