ಬೆಂಗಳೂರು: ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರೌಡಿ ಸೈಕಲ್ ರವಿಯ ಸಹಚರರನ್ನು ಸಿಸಿಬಿ ಪೊಲೀಸರು ಸೆರೆ ಹಿಡಿದಿದ್ದಾರೆ. ಗಂಗಾಧರ ಅಲಿಯಾಸ್ ಕರಿ ಗಂಗಾಧರ್, ಶಿವಕುಮಾರ್, ಅರ್ಜುನ್, ಮಂಜುನಾಥ್ ಹಾಗೂ ನರೇಶ್ ಬಂಧಿತರು.
ಅವರಿಂದ ಕಾರು, ತಲಾ ಎರಡು ಲಾಂಗ್, ದೊಣ್ಣೆ ಹಾಗೂ ಕತ್ತಿಯನ್ನು ಜಪ್ತಿ ಮಾಡಲಾಗಿದೆ. ‘ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು, ಹಣಕ್ಕಾಗಿ ದರೋಡೆ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.