ADVERTISEMENT

ಉಮಾಪತಿಗೆ ರಾಚಯ್ಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 20:10 IST
Last Updated 30 ಜೂನ್ 2019, 20:10 IST
ಡಿ. ಉಮಾಪತಿ
ಡಿ. ಉಮಾಪತಿ   

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಪತ್ರಿಕಾ ಸಂಪಾದಕರ ಸಂಘ ನೀಡುವ ರಾಜ್ಯ ಮಟ್ಟದ ಬಿ. ರಾಚಯ್ಯ ಸ್ಮಾರಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ. ಉಮಾಪತಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಫಲಕಗಳನ್ನು ಒಳಗೊಂಡಿದೆ.ಪತ್ರಿಕಾ ಸಂಪಾದಕರಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಶಂಕರಪ್ಪ ಹುಸನಪ್ಪ ಛಲವಾದಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ₹5 ಸಾವಿರ ನಗದು ಮತ್ತು ಫಲಕಗಳನ್ನು ಒಳಗೊಂಡಿದೆ.

ಚಿತ್ರದುರ್ಗದ ಮುರುಘಾ ಮಠದ ಅಲ್ಲಮಪ್ರಭು ಸಭಾಂಗಣದಲ್ಲಿ ಜುಲೈ 7ರಂದು ನಡೆಯುವ ಪತ್ರಿಕಾ ದಿನಾಚರಣೆ ಮತ್ತು ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.