ದಾಬಸ್ಪೇಟೆ: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, 15 ಬೈಕ್ ವಶಪಡಿಸಿಕೊಂಡಿದ್ದಾರೆ. ತುಮಕೂರಿನ ವಿನಯ್ ಹಾಗೂ ತುಮಕೂರು ತಾಲ್ಲೂಕು ಸೀತಕಲ್ಲು ಗ್ರಾಮದ ಗಣೇಶ್ ಬಂಧಿತರು.
ಆರೋಪಿಗಳು ಬೆಂಗಳೂರಿನ ಕಾಮಾಕ್ಷಿ ಪಾಳ್ಯ, ವೃಷಭಾವತಿ ನಗರ ಮತ್ತು ಗೊಟ್ಟಿಗೆರೆ, ತುಮಕೂರಿನ ಸತ್ಯಮಂಗಲ, ಶ್ರೀದೇವಿ ಮೆಡಿಕಲ್ ಕಾಲೇಜ್ ಹತ್ತಿರ, ನಾಗಣ್ಣನಪಾಳ್ಯ, ಹೀರೆಹಳ್ಳಿ ಕೈಗಾರಿಕಾ ಪ್ರದೇಶ, ದಾಬಸ್ಪೇಟೆ ಪಟ್ಟಣದ ಟೀಚರ್ ಬಡಾವಣೆ ಮತ್ತು ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನು ಕದ್ದು, ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.