ADVERTISEMENT

ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2019, 19:17 IST
Last Updated 30 ಜನವರಿ 2019, 19:17 IST

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ಇಮಚೇನಹಳ್ಳಿ ಪಾಳ್ಯ, ಬೆಟ್ಟದ ಹೊಸಹಳ್ಳಿ, ಹಾಲೇನಹಳ್ಳಿ, ಮಾಕೇನಹಳ್ಳಿ ಹಾಗೂ ಹೆಗ್ಗುಂದ ಗ್ರಾಮಗಳ ದಲಿತ ಕಾಲೊನಿಗಳಲ್ಲಿ ಎಸ್.ಜೆ.ಪಿ ಯೋಜನೆಯಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸಮೂರ್ತಿ ಇತ್ತೀಚೆಗೆ ಚಾಲನೆ ನೀಡಿದರು.

‘ಕಾಮಗಾರಿ ಗುಣಮಟ್ಟ ಕಾಪಾಡಬೇಕು’ ಎಂದು ಗುತ್ತಿಗೆದಾರಿಗೆ ಶಾಸಕರು ಎಚ್ಚರಿಕೆ ನೀಡಿದರು.

‘₹ 35 ಲಕ್ಷ ವೆಚ್ಚದ ಈ ಕಾಮಗಾರಿಯಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ಉಮೇಶ್ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.