
ದಾಬಸ್ ಪೇಟೆ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ಸಿಗಬೇಕು ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ಸೋಂಪುರ ಹೋಬಳಿಯ ಮಾಕೇನಹಳ್ಳಿ ಗ್ರಾಮದಲ್ಲಿ ನಡೆದ 5ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡ ಭಾಷೆ ತಾಯಿ ಇದ್ದಂತೆ. ಅನ್ಯ ಭಾಷೆಗಳನ್ನು ಕಲಿತರು ಮಾತೃಭಾಷೆಗೆ ಆದ್ಯತೆ ನೀಡಬೇಕು ಎಂದರು.
ಮುಖಂಡ ಗೋವಿಂದರಾಜು ಮಾತನಾಡಿ, ಕನ್ನಡ ನಾಡಿಗೆ ಸೇವೆ ಸಲ್ಲಿಸಿರುವ ಗಣ್ಯರ ಹೆಸರನ್ನು ಗ್ರಾಮ, ನಗರಗಳ ರಾಜಬೀದಿಗಳಿಗೆ ಇಡಬೇಕು. ಕನ್ನಡ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದರು.
ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಎನ್ಪಿಎ ಸದಸ್ಯ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಾಂಜೀನೇಯ, ಮಾಜಿ ಅಧ್ಯಕ್ಷರಾದ ಶಿವಕುಮಾರ್, ಸಿದ್ದರಾಜು, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ಸಿದ್ದರಾಜು, ಮಂಜುನಾಥ್, ಬೈರೇಗೌಡ, ಯೋಗೇಶ್, ರಘುವೀರ್, ಲೋಕೇಶ್, ನಯಾಜ್ ಖಾನ್ ಹಾಗೂ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.