ADVERTISEMENT

ಬೆಂಗಳೂರು ವಿವಿ ಬಿ.ಎ ಪಠ್ಯದಲ್ಲಿ ‘ದಲಿತ ಸಾಹಿತ್ಯದ ತಾತ್ವಿಕತೆ’ಗೆ ಕೊಕ್‌

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 22:16 IST
Last Updated 24 ಜನವರಿ 2023, 22:16 IST
   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎ ಪದವಿಯ ಮೂರನೇ ಸೆಮಿಸ್ಟರ್‌ನ ಪಠ್ಯಪುಸ್ತಕದ ನಾಲ್ಕನೇ ಅಧ್ಯಾಯ ‘ದಲಿತ ಸಾಹಿತ್ಯದ ತಾತ್ವಿಕತೆ’ ಪಾಠವನ್ನು ಪಠ್ಯದಿಂದ ತೆಗೆದುಹಾಕಲಾಗಿದೆ.

ಈ ಲೇಖನದಲ್ಲಿ ಕೆಲ ಜಾತಿ ಸೂಚಕ ಆಕ್ಷೇಪಾರ್ಹ ಪದಬಳಕೆ, ಮಾಹಿತಿ ದೋಷ ಇದ್ದವು. ಸಮಾಜದ ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಬಾರದು ಎನ್ನುವ ಕಾರಣಕ್ಕೆ ಪಠ್ಯದಿಂದ ತೆಗೆಯಲಾಗಿದೆ. ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ಸಭೆಯ ತೀರ್ಮಾನ, ಕುಲಪತಿ, ಕುಲಸಚಿವರ ಅನುಮೋದನೆ, ಸಿಂಡಿಕೇಟ್ ಸಭೆಯ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗಿದೆ. ಸಮಾಜದ ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗದಂತೆ ಪಠ್ಯ ರೂಪಿಸಲು ಅಧ್ಯಯನ ಮಂಡಳಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆ ಹೇಳಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT