ADVERTISEMENT

ದಸರಾ | ಸಾಲು ಸಾಲು ಸರ್ಕಾರಿ ರಜೆ, ಊರಿನತ್ತ ಜನರು: ಬಸ್‌ ದರ ದುಬಾರಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2023, 15:50 IST
Last Updated 20 ಅಕ್ಟೋಬರ್ 2023, 15:50 IST
<div class="paragraphs"><p>ಸಾಲು ಸಾಲು ರಜೆ... ಸಾಲು ಸಾಲು ವಾಹನ... ಮೈಸೂರು ಹಾಗೂ ಮಡಿಕೇರಿಯತ್ತ ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸಿದ್ದರಿಂದ ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದ ಮುಂಭಾಗ ಶುಕ್ರವಾರ ಸಂಜೆ ವಾಹನ ದಟ್ಟಣೆ ಉಂಟಾಗಿತ್ತು. -    </p></div>

ಸಾಲು ಸಾಲು ರಜೆ... ಸಾಲು ಸಾಲು ವಾಹನ... ಮೈಸೂರು ಹಾಗೂ ಮಡಿಕೇರಿಯತ್ತ ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸಿದ್ದರಿಂದ ಬೆಂಗಳೂರಿನ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣದ ಮುಂಭಾಗ ಶುಕ್ರವಾರ ಸಂಜೆ ವಾಹನ ದಟ್ಟಣೆ ಉಂಟಾಗಿತ್ತು. -

   

ಪ್ರಜಾವಾಣಿ ಚಿತ್ರ/ ರಂಜು ಪಿ

ಬೆಂಗಳೂರು: ದಸರಾ ಮಹೋತ್ಸವ, ಸಾಲು ಸಾಲು ಸರ್ಕಾರಿ ರಜೆಗಳು ಹಾಗೂ ಶಾಲೆಗಳಿಗೆ ದಸರಾ ರಜೆ ಇರುವುದರಿಂದ ಪ್ರವಾಸ, ಧಾರ್ಮಿಕ ಸ್ಥಳ ಹಾಗೂ ಊರಿಗೆ ತೆರಳುವರ ಸಂಖ್ಯೆ ಹೆಚ್ಚಾಗಿದ್ದು, ಶುಕ್ರವಾರ ನಗರದ ಬಸ್‌ ನಿಲ್ದಾಣಗಳೆಲ್ಲ ಪ್ರಯಾಣಿಕರಿಂದ ಭರ್ತಿಯಾಗಿದ್ದವು.

ADVERTISEMENT

ನಗರದಿಂದ ಹೊರಟ ಎಲ್ಲ ಬಸ್‌ಗಳು ಪ್ರಯಾಣಿಕರಿಂದ ತುಂಬಿದ್ದವು. ಗುರುವಾರ ರಾತ್ರಿಯಿಂದಲೇ ಜನರು ಊರಿನತ್ತ ತೆರಳಿದ್ದು ಕಂಡುಬಂತು. ನಗರದ ಕೆಂಪೇಗೌಡ ಬಸ್‌ನಿಲ್ದಾಣ, ಯಶವಂತಪುರ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕಂಟೋನ್ಮೆಂಟ್‌ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣದಲ್ಲೂ ಪ್ರಯಾಣಿಕರ ದಟ್ಟಣೆಯಿತ್ತು.

ಖಾಸಗಿ ಬಸ್‌ಗಳಲ್ಲಿ ಪ್ರಯಾಣ ದರವು ದುಬಾರಿಯಾಗಿತ್ತು. ಕೊನೆಯ ಕ್ಷಣದಲ್ಲಿ ಬಂದ ಪ್ರಯಾಣಿಕರಿಗೆ ಸೀಟು ಲಭ್ಯ ಇಲ್ಲ ಎಂಬ ಉತ್ತರ ದೊರೆಯಿತು. ಇದರಿಂದ ಊರಿಗೆ ತೆರಳಲು ಬಂದ ಪ್ರಯಾಣಿಕರು ನಿರಾಸೆಗೆ ಒಳಗಾದರು.

ಧಾರ್ಮಿಕ ಸ್ಥಳದತ್ತ ಜನರು:

ನಗರದಿಂದ ಧರ್ಮಸ್ಥಳ, ಉಡುಪಿ, ಮಂಗಳೂರು, ಹೊರನಾಡು, ಶೃಂಗೇರಿಯತ್ತ ಹೆಚ್ಚಿನ ಮಂದಿ ಶುಕ್ರವಾರ ರಾತ್ರಿಯಿಂದಲೇ ಪ್ರಯಾಣಿಸಿದರು. ಶನಿವಾರ ಇನ್ನೂ ಹೆಚ್ಚಿನ ಮಂದಿ ತೆರಳಲಿದ್ದಾರೆ ಎಂದು ಚಾಲಕರು ತಿಳಿಸಿದರು. ಮೈಸೂರು ದಸರಾ ವೀಕ್ಷಣೆಗೆ ತೆರಳುವವರ ಸಂಖ್ಯೆಯೂ ಈ ಬಾರಿ ಏರಿಕೆಯಾಗಿದೆ. ಮಡಿಕೇರಿಯಲ್ಲೂ ದಸರಾ ನಡೆಯುತ್ತಿದ್ದು, ಮಂಜಿನ ನಗರಿಯತ್ತ ಯುವಜನತೆ ಪ್ರಯಾಣಿಸಿದರು.

ಕೆಎಸ್‌ಆರ್‌ಟಿಸಿ 2,000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ವ್ಯವಸ್ಥೆ ಮಾಡಿದೆ. ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಬಸ್‌ಗಳಲ್ಲಿ ಜನರು ವಿವಿಧ ನಗರಕ್ಕೆ ತೆರಳಿದವು.

ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟಣೆ:

ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆಯಲ್ಲಿ ಗುರುವಾರ ರಾತ್ರಿಯಿಂದಲೇ ವಾಹನ ದಟ್ಟಣೆ ಕಂಡುಬಂತು. ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಚಾಲಕರು ಪರದಾಡಿದರು.

ಆರ್‌ಟಿಒ ಪರಿಶೀಲನೆ: ಹೆಚ್ಚಿನ ದರ ವಸೂಲಿ ಮಾಡಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್‌ಗಳ ಮೇಲೆ ಆರ್‌ಟಿಒ ಅಧಿಕಾರಿಗಳು ದಾಳಿ ಪರಿಶೀಲನೆ ನಡೆಸಿದರು.

ಕೆಲವು ಖಾಸಗಿ ಬಸ್‌ಗಳಲ್ಲಿ ಮಿತಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯುತ್ತಿರುವುದು ತಪಾಸಣೆ ವೇಳೆ ಕಂಡುಬಂದಿದೆ. ಚಾಲಕರು ಹಾಗೂ ನಿರ್ವಾಹಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಖಾಸಗಿ ಬಸ್‌ನಲ್ಲಿ ಹೆಚ್ಚಾದ ಪ್ರಯಾಣ ದರ  

ನಗರ;ಕನಿಷ್ಠ;ಗರಿಷ್ಠಮಡಿಕೇರಿ;₹650;₹1499ಹುಬ್ಬಳ್ಳಿ; ₹1449;₹4000ಬೆಳಗಾವಿ; ₹1800;₹4444ಮಂಗಳೂರು; ₹1000;₹3500ಕಲಬುರ್ಗಿ; ₹1899;₹3500ಶಿವಮೊಗ್ಗ; ₹750;₹1999ಉಡುಪಿ; ₹1499;3500

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.