ADVERTISEMENT

ಶೇ 50ರಷ್ಟು ಹಾಸಿಗೆ ಕಾಯ್ದಿರಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 18:58 IST
Last Updated 13 ಜುಲೈ 2020, 18:58 IST
ಅಧಿಕಾರಿಗಳೊಂದಿಗೆ ಶಾಸಕ ಆರ್.ಮಂಜುನಾಥ್ ಚರ್ಚೆ ನಡೆಸಿದರು.
ಅಧಿಕಾರಿಗಳೊಂದಿಗೆ ಶಾಸಕ ಆರ್.ಮಂಜುನಾಥ್ ಚರ್ಚೆ ನಡೆಸಿದರು.   

ಬೆಂಗಳೂರು: 'ದಾಸರಹಳ್ಳಿ ವಲಯದ ಖಾಸಗಿ ಆಸ್ಪತ್ರೆಗಳಲ್ಲಿ ಶೇ 50ರಷ್ಟು ಹಾಸಿಗೆಗಳನ್ನು ಕ್ಷೇತ್ರದ ಕೋವಿಡ್‌ ರೋಗಿಗಳಿಗೆ ಕಾಯ್ದಿರಿಸಬೇಕು' ಎಂದು ಶಾಸಕ ಆರ್.ಮಂಜುನಾಥ್ ಸೂಚಿಸಿದರು.

ಕೊರೊನಾ ನಿಯಂತ್ರಣಕ್ಕಾಗಿ ದಾಸರಹಳ್ಳಿ ವಲಯದ ಪಾಲಿಕೆ ಕಚೇರಿಯಲ್ಲಿ ಸೋಮವಾರ ನಡೆದ ಖಾಸಗಿ ಆಸ್ಪತ್ರೆಗಳ ಮಾಲೀಕರು, ಆಡಳಿತಾಧಿಕಾರಿಗಳು ಹಾಗೂ ಉನ್ನತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

'ಈ ಭಾಗದಲ್ಲಿ ಕೊರೊನಾ ಸಂಬಂಧದ ದೂರುಗಳಿಗೆ ಸ್ಪಂದಿಸಲು 080-29590057, 080-29635906, 080-29635904 ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಕ್ಷೇತ್ರದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಹಾಯವಾಣಿಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು' ಎಂದು ಜಂಟಿ ಆಯುಕ್ತರು ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.