ADVERTISEMENT

ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ

ಆರೋಗ್ಯ ಸಮಸ್ಯೆಯಿಂದ ನೊಂದಿದ್ದ ಕುಟುಂಬ: ಆತ್ಮಹತ್ಯೆ ಶಂಕೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 22:06 IST
Last Updated 18 ಆಗಸ್ಟ್ 2022, 22:06 IST
ಮಗನ ಜೊತೆ ಮಹೇಶ್‌ಕುಮಾರ್ ಹಾಗೂ ಜ್ಯೋತಿ
ಮಗನ ಜೊತೆ ಮಹೇಶ್‌ಕುಮಾರ್ ಹಾಗೂ ಜ್ಯೋತಿ   

ಬೆಂಗಳೂರು: ಕೋಣನಕುಂಟೆ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರ ಮೃತದೇಹಗಳು ಗುರುವಾರ ಮಧ್ಯಾಹ್ನ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

‘ಚುಂಚನಕಟ್ಟೆ ಎಸ್‌ಬಿಐ ಲೇಔಟ್ ನಿವಾಸಿ ಮಹೇಶ್ ಕುಮಾರ್ (44), ಪತ್ನಿ ಜ್ಯೋತಿ (29) ಹಾಗೂ ಮಗ ನಂದೀಶ್ ಗೌಡ (9) ಅವರ ಮೃತದೇಹ ಪತ್ತೆಯಾಗಿದೆ. ಮಗನನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮಹೇಶ್‌ಕುಮಾರ್ ಅವರು ಗುತ್ತಿಗೆ ಆಧಾರದಲ್ಲಿ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದರು. ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಅದರಿಂದ ಬೇಸತ್ತು ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ತಿಳಿಸಿವೆ.

ADVERTISEMENT

‘ಗುರುವಾರ ಬೆಳಿಗ್ಗೆಯಿಂದ ಕುಟುಂ ಬದವರು ಹೊರಗೆ ಬಂದಿರಲಿಲ್ಲ. ಅನು ಮಾನಗೊಂಡ ಸ್ಥಳೀಯರು, ಮನೆ ಬಳಿ ಹೋಗಿ ನೋಡಿದಾಗ ಮೃತದೇಹಗಳು ಕಂಡಿದ್ದವು’ ಎಂದು ಹೇಳಿವೆ.

‘ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹೇಶ್ ಮೃತ ದೇಹವಿತ್ತು. ಪತ್ನಿ ಹಾಗೂ ಮಗನ ಮೃತದೇಹಗಳು ಮತ್ತೊಂದು ಕೊಠಡಿಯಲ್ಲಿದ್ದವು. ಅವರಿಬ್ಬರು ವಿಷ ಸೇವನೆಯಿಂದ ಮೃತ ಪಟ್ಟಿರುವ ಅನು ಮಾನವಿದೆ. ಮನೆಯಲ್ಲಿ ಮರಣಪತ್ರ ಸಿಕ್ಕಿದ್ದು, ಪರಿಶೀಲಿಸಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.