ADVERTISEMENT

ವ್ಯಕ್ತಿ ಕೊಲೆ: ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 3:53 IST
Last Updated 6 ಜುಲೈ 2022, 3:53 IST

ಬೆಂಗಳೂರು: ಕಾಡುಗೋಡಿ ಠಾಣೆ ವ್ಯಾಪ್ತಿಯ ಬೆಳತೂರು ಬಳಿಯ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

‘35ರಿಂದ 45 ವಯಸ್ಸಿನ ವ್ಯಕ್ತಿಯನ್ನು ಕೊಲೆ ಮಾಡಿ, ಚರಂಡಿಯಲ್ಲಿ ಎಸೆಯಲಾಗಿದೆ. ಮೃತನ ಹೆಸರು ಗೊತ್ತಾಗಿಲ್ಲ. ಸ್ಥಳೀಯರ ಹೇಳಿಕೆ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಕಾಡುಗೋಡಿ ಠಾಣೆ ಪೊಲೀಸರು ಹೇಳಿದರು.

‘ಮೂರು ದಿನಗಳ ಹಿಂದೆಯೇ ವ್ಯಕ್ತಿಯನ್ನು ಕೊಲೆ ಮಾಡಿರುವ ಶಂಕೆ ಇದೆ. ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ, ಚೀಲದ ಸಮೇತ ಚರಂಡಿಗೆ ಎಸೆಯಲಾಗಿದೆ. ಸೋಮವಾರ ಬೆಳಿಗ್ಗೆ ಚೀಲದ ಒಂದು ಭಾಗ ಹರಿದಿದ್ದರಿಂದ, ಸ್ಥಳೀಯರು ಮೃತದೇಹ ಗಮನಿಸಿದ್ದರು. ಅವರು ನೀಡಿದ್ದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.