ಬೆಂಗಳೂರು: ವಸತಿಗೃಹದ ಮೂರನೇ ಮಹಡಿಯ ಟೇರೆಸ್ನಿಂದ ಆಯ ತಪ್ಪಿ ಬಿದ್ದು ರಾಜ್ಯ ಮೀಸಲು ಪಡೆಯ (ಕೆಎಸ್ಆರ್ಪಿ) ಕಾನ್ಸ್ಟೆಬಲ್ ಮೃತಪಟ್ಟ ಘಟನೆ ಕೋರಮಂಗಲದಲ್ಲಿ ನಡೆದಿದೆ.
9ನೇ ಬೆಟಾಲಿಯನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿ.ಎನ್. ಮುದ್ರೆ (59) ಮೃತಪಟ್ಟವರು.
ಕೋರಮಂಗಲದಲ್ಲಿರುವ ವಸತಿಗೃಹದಲ್ಲಿ ನೆಲೆಸಿದ್ದ ಮುದ್ರೆ ಅವರು, ಟ್ಯಾಂಕ್ನಲ್ಲಿ ನೀರು ಇದೆಯೇ ಎಂದು ಪರಿಶೀಲಿಸಲು ಬುಧವಾರ ಬೆಳಿಗ್ಗೆ 6.20ರ ಸುಮಾರಿಗೆ ಟೇರೆಸ್ಗೆ ತೆರಳಿದ್ದರು. ಈ ವೇಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
‘ಮುದ್ರೆ ಅವರು ದಿನಾ ಬೆಳಿಗ್ಗೆ ಟ್ಯಾಂಕ್ನಲ್ಲಿ ನೀರಿದೆಯೇ ಎಂದು ಪರಿಶೀಲಿಸುತ್ತಿದ್ದರು. ಬುಧವಾರ ಬೆಳಿಗ್ಗೆ ಕೂಡಾ ಹೋಗಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ’ ಎಂದು ಪೊಲೀಸರು ತಿಳಿಸಿದರು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.