ಬೆಂಗಳೂರು: ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಿಲಕ್ನಗರದಲ್ಲಿ ಬುಧವಾರ ನಡೆದಿದೆ.
ನಗರದಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಯಿಂದ ಇಲ್ಲಿನ ಸಾಗರ್ ಅಪೋಲೊ ಆಸ್ಪತ್ರೆ ಬಳಿ ಮರ ಉರುಳಿ, ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಆಸ್ಪತ್ರೆಯೊಂದರಲ್ಲಿ ಡಿ ಗ್ರೂಪ್ ನೌಕರರಾಗಿದ್ದ ವೆಂಕಟೇಶ್ (41) ಎಂಬುವರು ಕೆಲಸ ಮುಗಿಸಿ ಮನೆಯತ್ತ ಹೊರಟಿದ್ದರು.ಕತ್ತಲಿನಲ್ಲಿ ಸಾಗುವಾಗ ತುಂಡಾಗಿದ್ದತಂತಿಯನ್ನು ವೆಂಕಟೇಶ್ ತುಳಿದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹವನ್ನು ವಿಕ್ಟೊರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.