ಬೆಂಗಳೂರು: ದೇವರಬೀಸನಹಳ್ಳಿ ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ಪದ್ಮನಾಭ್ ಮುಳುಗಿ ಮೃತಪಟ್ಟಿದ್ದಾನೆ.
ಬೆಳ್ಳಂದೂರು ನಿವಾಸಿಯಾದ ಈತ, ಸಮೀಪದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ. ಶನಿವಾರ ತರಗತಿ ಮುಗಿಸಿಕೊಂಡು ಸಂಜೆ 4 ಗಂಟೆ ಸುಮಾರಿಗೆ ಸ್ನೇಹಿತರ ಜತೆ ಕೆರೆಗೆ ತೆರಳಿದ್ದ. ಈಜು ಬಾರದಿದ್ದರೂ ನೀರಿಗೆ ಧುಮುಕಿದ ಪದ್ಮನಾಭ್, ನೆರವಿಗೆ ಕೂಗಿಕೊಳ್ಳುತ್ತ ಸ್ವಲ್ಪ ಸಮಯದಲ್ಲೇ ಮುಳುಗಿದ್ದಾನೆ.
ಸ್ನೇಹಿತರ ಚೀರಾಟ ಕೇಳಿ, ಸ್ಥಳೀಯ ಯುವಕರು ಕೆರೆಗೆ ಹಾರಿ ಶೋಧ ನಡೆಸಿದರೂ ಆತ ಪತ್ತೆಯಾಗಿಲ್ಲ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ, ಎರಡು ತಾಸು ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.