ADVERTISEMENT

‘ಕೋವಿಡ್ ಇಳಿಕೆ; ನಿರ್ಲಕ್ಷ್ಯ ಸಲ್ಲದು’

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 19:49 IST
Last Updated 30 ಅಕ್ಟೋಬರ್ 2020, 19:49 IST
ಬೊಮ್ಮನಹಳ್ಳಿ ವಲಯ ಕೋವಿಡ್ ಉಸ್ತುವಾರಿ ಮಣಿವಣ್ಣನ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜಂಟಿ ಆಯುಕ್ತ ಎಂ.ರಾಮಕೃಷ್ಣ ಇದ್ದಾರೆ
ಬೊಮ್ಮನಹಳ್ಳಿ ವಲಯ ಕೋವಿಡ್ ಉಸ್ತುವಾರಿ ಮಣಿವಣ್ಣನ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜಂಟಿ ಆಯುಕ್ತ ಎಂ.ರಾಮಕೃಷ್ಣ ಇದ್ದಾರೆ   

ಬೊಮ್ಮನಹಳ್ಳಿ: ‘ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವುದು ಆಶಾದಾಯಕವಾದರೂ, ಮೈಮರೆಯದೇ ಹೆಚ್ಚು ಪರೀಕ್ಷೆ ಮಾಡುವತ್ತ ಗಮನ ನೀಡಬೇಕು’ ಎಂದು ಬೊಮ್ಮನಹಳ್ಳಿ ವಲಯದ ಕೋವಿಡ್ ಉಸ್ತುವಾರಿ ಮಣಿವಣ್ಣನ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಕಚೇರಿಯಲ್ಲಿಗುರುವಾರ ನಡೆದ ಸಭೆಯಲ್ಲಿ, ಕೋವಿಡ್ ಕಾರ್ಯಾಚರಣೆಯ ಪ್ರಗತಿ ಕಾರ್ಯದ ಪರಿಶೀಲನೆ ನಡೆಸಿ ಮಾತನಾಡಿದರು.

‘ಪ್ರತಿ ದಿನ ಐದು ಸಾವಿರದಿಂದ ಆರು ಸಾವಿರ ಪರೀಕ್ಷೆಗಳನ್ನು ನಡೆಸಲೇಬೇಕು. ಸಾರ್ವಜನಿಕ ಸ್ಥಳಗಳು, ಸಂತೆ, ಕೈಗಾರಿಕೆಗಳು ಹಾಗೂ ವಸತಿ ಸಂಕೀರ್ಣಗಳ ಬಳಿ ಕ್ಯಾಂಪ್ ಹಾಕಿ ಎಲ್ಲರನ್ನೂ ಪರೀಕ್ಷೆಗೊಳಪಡಿಸಬೇಕು’ ಎಂದರು.

ADVERTISEMENT

‘ಮಾಸ್ಕ್ ಹಾಕದೇ ಓಡಾಡುವವರಿಗೆ ದಂಡ ವಿಧಿಸುವುದರ ಜತೆಗೆ ಕೋವಿಡ್ ಪರೀಕ್ಷೆಗೊಳಪಡಿಸಬೇಕು’ ಎಂದರು.

‘ಸಾರ್ವಜನಿಕರು ಪರಸ್ಪರ ಅಂತರ ಕಾಯ್ದುಕೊಳ್ಳುವುದು ಹಾಗು ಮಾಸ್ಕ್ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಈ ಕೆಲಸಗಳಲ್ಲಿ ಉದಾಸೀನ ಮಾಡಿದ ಅಧಿಕಾರಿಗಳನ್ನು ಮುಲಾಜಿಲ್ಲದೆ ಅಮಾನತು ಮಾಡಲಾಗು ವುದು’ ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಂಟಿ ಆಯುಕ್ತ ಎಂ.ರಾಮಕೃಷ್ಣ, ಆರೋಗ್ಯಾಧಿಕಾರಿ ಡಾ.ನಾರಾಯಣಸ್ವಾಮಿ ಹಾಗೂ ಡಾ. ನಾಗೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.