ಬೆಂಗಳೂರು: ದೀಪಾವಳಿ ಮೊದಲ ದಿನವೇ (ಶನಿವಾರ) ನಗರದಲ್ಲಿ ಪಟಾಕಿಯಿಂದ ಮೂವರು ಮಕ್ಕಳು ಗಾಯಗೊಂಡಿದ್ದಾರೆ.
ಮಾಗಡಿಯ ತನೀಶ್ (7), ರಾಜಾಜಿನಗರದ ಅನ್ಷುಮಾ (5) ಹಾಗೂ ವಿಜಯಾನಂದ ನಗರದ ಸುಹೇಲ್ (12) ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ.
ತನೀಶ್ ಮತ್ತು ಅನ್ಷುಮಾ ನಗರದ ನಾರಾಯಣ ನೇತ್ರಾಲಯದ ಹೊರ ರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸುಹೇಲ್ಗೆ ಮುಖಕ್ಕೆ ಸುಟ್ಟ ಗಾಯಗಳಾಗಿದ್ದು, ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.