ADVERTISEMENT

ಒಳ ಮೀಸಲಾತಿ: ಶೀಘ್ರ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 16:00 IST
Last Updated 20 ಜೂನ್ 2025, 16:00 IST
<div class="paragraphs"><p>ಒಳ ಮೀಸಲಾತಿ</p></div>

ಒಳ ಮೀಸಲಾತಿ

   

ಬೆಂಗಳೂರು: ‘ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿಗೆ ಕೈಗೊಂಡಿರುವ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಿಸದೆ, ಲಭ್ಯವಿರುವ ದತ್ತಾಂಶದ ಅನ್ವಯ ಒಳ ಮೀಸಲಾತಿ ಅನುಷ್ಠಾನಗೊಳಿಸಬೇಕು’ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಸಮಿತಿಯು ಸರ್ಕಾರವನ್ನು ಒತ್ತಾಯಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ್ ಕೌತಾಳ್, ‘ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ಅಧ್ಯಕ್ಷತೆಯ ಏಕಸದಸ್ಯ ವಿಚಾರಣಾ ಆಯೋಗವು ಕೆಲ ಜಿಲ್ಲೆಗಳಲ್ಲಿ ಶೇ 100ರಷ್ಟು ಸಮೀಕ್ಷೆ ಪೂರ್ಣಗೊಳಿಸಿದೆ. ಒಟ್ಟಾರೆ ರಾಜ್ಯದಲ್ಲಿ ಶೇ 91ರಿಂದ 92ರಷ್ಟು ಸಮೀಕ್ಷೆಯಾಗಿದೆ. ಆದ್ದರಿಂದ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಒಳ ಮೀಸಲಾತಿ ಜಾರಿಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಬೆಂಗಳೂರು ನಗರದಲ್ಲಿ ಸಮೀಕ್ಷೆಗೆ ಒಳಪಟ್ಟವರ ಶೇಕಡಾವಾರು ಸಂಖ್ಯೆ ಕಡಿಮೆ ಇರುವ ಕಾರಣ, ಈ ಹಿಂದೆ ಎರಡು ಬಾರಿ ಸಮೀಕ್ಷೆಯ ಕಾಲಾವಧಿ ವಿಸ್ತರಿಸಲಾಗಿದೆ. ಆದರೂ ಜನರು ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳುತ್ತಿಲ್ಲ. ಆದ್ದರಿಂದ ಪುನಃ ಸಮೀಕ್ಷೆಯ ಕಾಲಾವಧಿ ವಿಸ್ತರಣೆ ಮಾಡುವುದು ಸರಿಯಾದ ಕ್ರಮವಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.