ADVERTISEMENT

ಸೇವಾ ಭದ್ರತೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2019, 18:50 IST
Last Updated 9 ಫೆಬ್ರುವರಿ 2019, 18:50 IST

ಬೆಂಗಳೂರು: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎಲ್ಲಾ ವರ್ಗದ ನೌಕರರಿಗೂಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಇದೇ 12ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಹಮ್ಮಿಕೊಳ್ಳಲಾಗುತ್ತದೆ’ ಎಂದುಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ–ಬ್ಯಾಂಕುಗಳ ಕ್ಷೇಮಾಭಿವೃದ್ಧಿ ಮಹಾಮಂಡಲದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಸ್‌.ಬಡಗಿಗೌಡರ್‌ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಾಥಮಿಕಕೃಷಿ ಪತ್ತಿನ ಸಹಕಾರ ಸಂಘಗಳು ಸುಮಾರು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ರೈತರ ಎಲ್ಲಾ ಕೆಲಸಗಳನ್ನು ಮಾಡುತ್ತಿವೆ. ಆದರೂ ಅವರಿಗೇ ಸೇವಾ ಭದ್ರತೆ ಇಲ್ಲ. ಈ ಬಗ್ಗೆ ಅನೇಕ ಬಾರಿ ಪ್ರತಿಭಟನೆ ಮಾಡಲಾಗಿದೆ. ಸಹಕಾರ ಸಚಿವರಿಗೂ ಮನವರಿಕೆ ಮಾಡಲಾಗಿದೆ. ಆದರೂ, ಗಮನಹರಿಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT