ಬೆಂಗಳೂರು: ರಾಜ್ಯದ ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸಿಪಿಗಳು ಹಾಗೂ ಇನ್ಸ್ಪೆಕ್ಟರ್ಗಳಿಗೆ ನಿಗದಿ ಮಾಡಲಾಗಿದ್ದ ಐದು ವರ್ಷಗಳ ಸೇವಾವಧಿ ಕಾಲಮಿತಿಯನ್ನು ರದ್ದುಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಈ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದ ಬಹುಮುಖ್ಯ ಆದೇಶವೊಂದನ್ನು ಹಿಂಪಡೆದಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯ ಅಧಿಕಾರಿಗಳಿಗೆ ಐದು ವರ್ಷ ಸೇವಾವಧಿ ನಿಗದಿಪಡಿಸಿ ನಿಯಮ ಜಾರಿಗೆ ತಂದಿದ್ದ ಕಾಂಗ್ರೆಸ್ ಸರ್ಕಾರ, ಆ ಮೂಲಕ ಹಲವು ವರ್ಷಗಳಿಂದ ಒಂದೇ ಕಡೆ ಬೀಡುಬಿಟ್ಟಿದ್ದವರ ಕಾರ್ಯಸ್ಥಾನವನ್ನು ಬದಲಾಯಿಸಿತ್ತು. ವರ್ಗವಾದ ಅಧಿಕಾರಿಗಳು ಮತ್ತೆ ಕಮಿಷನರೇಟ್ ವ್ಯಾಪ್ತಿಗೆ ಬರಲು ‘ಗಾಡ್ಫಾದರ್’ಗಳ ಮೂಲಕ ನಿರಂತರವಾಗಿ ಲಾಬಿ ನಡೆಸುತ್ತಿದ್ದರು.
ಇದೀಗ ಆ ಲಾಬಿ ಫಲ ಕೊಟ್ಟಂತಾಗಿದ್ದು, ಹಳಬರ ದಂಡು ಮತ್ತೆ ಕಮಿಷನರೇಟ್ ವ್ಯಾಪ್ತಿಗೆ ಬರಲು ಬಾಗಿಲು ತೆರೆದಂತಾಗಿದೆ. ‘ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅನುಭವಿ ಅಧಿಕಾರಿಗಳ ಅಗತ್ಯವಿದೆ. ಹಾಗಾಗಿ ಹಿಂದಿನ ನಿಯಮವನ್ನು ಹಿಂಪಡೆಯಲಾಗಿದೆ’ ಎಂದು ಸರ್ಕಾರ ಆದೇಶದಲ್ಲಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.