ADVERTISEMENT

ಗುತ್ತಿಗೆ ಸಿಬ್ಬಂದಿಗೆ ಗೌರವಧನ ಬಿಡುಗಡೆಗೆ ಒತ್ತಾಯಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 17:48 IST
Last Updated 5 ಸೆಪ್ಟೆಂಬರ್ 2020, 17:48 IST
ವಿಧಾನ ಪರಿಷತ್ ಸದಸ್ಯರಾದ ಜಿ.ರಘು ಆಚಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರು ವಿಧಾನಸೌಧ ಬಳಿಯಿರುವ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಿದರು.
ವಿಧಾನ ಪರಿಷತ್ ಸದಸ್ಯರಾದ ಜಿ.ರಘು ಆಚಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಅವರು ವಿಧಾನಸೌಧ ಬಳಿಯಿರುವ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಿದರು.   

ಬೆಂಗಳೂರು: ಆಸ್ಪತ್ರೆಗಳಲ್ಲಿ ಕೊರೊನಾ ಸೇವೆಯಲ್ಲಿ ತೊಡಗಿರುವ ಗುತ್ತಿಗೆ ಸಿಬ್ಬಂದಿಗೆ ಈವರೆಗೆ ಗೌರವಧನ ಬಿಡುಗಡೆ ಮಾಡದೆ, ಸರ್ಕಾರ ನಿರ್ಲಕ್ಷ್ಯ ಧೋರಣೆ ಮಾಡಿದೆ ಎಂದು ಖಂಡಿಸಿ ವಿಧಾನ ಪರಿಷತ್ ಸದಸ್ಯರಾದ ಜಿ.ರಘು ಆಚಾರ್ ಹಾಗೂ ಬಿ.ಕೆ.ಹರಿಪ್ರಸಾದ್ ಅವರು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಶನಿವಾರ ಧರಣಿ ನಡೆಸಿದರು.

ಬಳಿಕ ಮಾತನಾಡಿದ ಜಿ.ರಘು ಆಚಾರ್, 'ಜುಲೈ ಹಾಗೂ ಆಗಸ್ಟ್ ನಲ್ಲಿ ಚಿತ್ರದುರ್ಗ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಿಗೆ ಎರಡು ಬಾರಿ ಭೇಟಿ ನೀಡಿದೆ. ಅಲ್ಲಿ ಕೊರೊನಾ ಯೋಧರಾಗಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿ ನಾಲ್ಕು ತಿಂಗಳಿನಿಂದ ವೇತನವಿಲ್ಲದೆ ಸೇವೆಯಲ್ಲಿ ತೊಡಗಿರುವ ವಿಚಾರ ತಿಳಿಯಿತು' ಎಂದು ಬೇಸರ ವ್ಯಕ್ತಪಡಿಸಿದರು.

'ಈ ಬಗ್ಗೆ ಪರಿಶೀಲಿಸಿದಾಗ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಇದೇ ಸ್ಥಿತಿ ಇರುವುದು ಕಂಡುಬಂತು. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿ, 20 ದಿನಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ. ಕೂಡಲೇ ಅವರಿಗೆ ವೇತನ ಬಿಡುಗಡೆ ಮಾಡದಿದ್ದರೆ, ಮುಂದಿನ ವಿಧಾನಪರಿಷತ್ ಅಧಿವೇಶನದಲ್ಲಿ ಸಭಾಪತಿ ಪೀಠದ ಎದುರು ಧರಣಿ ನಡೆಸುತ್ತೇವೆ' ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.