ದಾಬಸ್ ಪೇಟೆ: ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯೋಗೀಶ್ ಗೌಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಕೆಲವು ಸಮಸ್ಯೆಗಳನ್ನು ಕಂಡು ಗರಂ ಆದರು. ಸಂಬಂಧಿಸಿದವರನ್ನು ತರಾಟೆಗೆ ತೆಗೆದುಕೊಂಡರು. ‘ಕೆಲ ವ್ಯತ್ಯಾಸಗಳು ಇರುವುದು ಕಂಡು ಬಂದಿದೆ. ಅದನ್ನು ಸರಿ ಮಾಡಿಕೊಳ್ಳುವಂತೆ ಕಟ್ಟುನಿಟ್ಟಾಗಿ ತಿಳಿಸಲಾಗಿದೆ’ ಎಂದು ತಿಳಿಸಿದರು.
ಸಮವಸ್ತ್ರ ಧರಿಸದ ನರ್ಸ್ಗಳನ್ನು ತರಾಟೆಗೆ ತೆಗೆದುಕೊಂಡರು. ಗೈರುಹಾಜರಾದ ಡಿ ಗ್ರೂಪ್ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವುದಾಗಿ ಹೇಳಿದರು. ‘ವೈದ್ಯರ ಕೊರತೆ ನೀಗಿಸಲು ಶಿವಗಂಗೆ, ನರಸೀಪುರ, ಎಲೆಕ್ಯಾತನಹಳ್ಳಿಯಲ್ಲಿನ ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.