ಬೆಂಗಳೂರು: ಸಿನಿಮಾ ನಿರ್ದೇಶಕ ಕೆ. ನಂಜುಂಡ ಅವರು ಅನಾರೋಗ್ಯದಿಂದಾಗಿ ಮಂಗಳವಾರ ನಿಧನ ಹೊಂದಿದರು.
ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿ ಸಲಾಗಿತ್ತು.
ಎರಡು ದಶಕಗಳಿಂದ ಚಿತ್ರರಂಗ ದಲ್ಲಿದ್ದ ಅವರು 'ಕನಸಲೂ ನೀನೆ ಮನಸಲೂ ನೀನೆ', 'ಮೆಲೋಡಿ' ಸಿನಿಮಾವನ್ನು ನಿರ್ದೇಶಿಸಿದ್ದರು. ಹಲವು ಚಿತ್ರಗಳಿಗೆ ಸಂಭಾಷಣೆಕಾರರಾಗಿಯೂ ಕೆಲಸ ಮಾಡಿದ್ದರು.
ಹೆಬ್ಬಾಳದ ರುದ್ರಭೂಮಿಯಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.