ADVERTISEMENT

ಲಿಂಗಾಯತರಿಗೆ ಅವಹೇಳನ, ಗೋಪಾಲಯ್ಯಗೆ ಎಚ್ಚರಿಕೆ ಕೊಡಿ– ಡಾ.ಗಿರೀಶ್ ಕೆ.ನಾಶಿ

ಸೋಲಿನ ಭೀತಿ: ಲಿಂಗಾಯತ ಜಾತಿ ಅವಹೇಳನ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 10:11 IST
Last Updated 28 ನವೆಂಬರ್ 2019, 10:11 IST
   

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಅವರು ಲಿಂಗಾಯತ ಜಾತಿಗೆ ಅವಹೇಳನ ಮಾಡಿದ್ದು, ಅವರಿಗೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಎಚ್ಚರಿಕೆ ನೀಡಬೇಕು ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಗಿರೀಶ್ ಕೆ.ನಾಶಿ ಆಗ್ರಹಿಸಿದರು.

ಪಕ್ಷದ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಪಾಲಯ್ಯ ಅವರಿಗೆ ಸೋಲಿನ ಭೀತಿ ಉಂಟಾಗಿದೆ, ಹೀಗಾಗಿ ತಮ್ಮ ಹಿಂಬಾಲಕರ ಮೂಲಕ ಇಂತಹ ಅವಹೇಳನಕ್ಕೆ ಹೊರಟಿದ್ದಾರೆ ಎಂದು ಹೇಳಿದರು.

ಜಾತಿ ನಿಂದನೆ ಕುರಿತು ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದರು.

ADVERTISEMENT

‘ಕ್ಷೇತ್ರದಲ್ಲಿ ನಾವು ಮನೆ ಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದೇವೆ. ಆದರೆ ಗೋಪಾಲಯ್ಯ ಅವರು ಕ್ಷೇತ್ರದಲ್ಲಿ ಕಾಣಿಸುತ್ತಿಲ್ಲ. ಮೇಲುನೋಟಕ್ಕೆ ಗೋಪಾಲಯ್ಯ ಪರವಾಗಿ ಅಬ್ಬರದ ಪ್ರಚಾರ ನಡೆಯುತ್ತಿದ್ದರೂ, ಒಳಹರಿವು ಜೆಡಿಎಸ್ ಪರವಾಗಿದೆ’ ಎಂದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಪಕ್ಷದ ಬೆಂಗಳೂರು ಉತ್ತರ ಘಟಕದ ಅಧ್ಯಕ್ಷ ಪ್ರಕಾಶ್, ಮುಖಂಡ ಭದ್ರೇಗೌಡ ಅವರು ಜೆಡಿಎಸ್ ಪ್ರಚಾರದ ಕುರಿತು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.