ADVERTISEMENT

81,582 ಕುಟುಂಬಕ್ಕೆ 27ರಂದು ಹಕ್ಕುಪತ್ರ ವಿತರಣೆ: ಅಶೋಕ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 22:53 IST
Last Updated 23 ಮಾರ್ಚ್ 2023, 22:53 IST
   

ಬೆಂಗಳೂರು:‌ ‘ಗೊಲ್ಲರಹಟ್ಟಿ, ಕುರುಬರ ದೊಡ್ಡಿಗಳಲ್ಲಿ ವಾಸ ಮಾಡುವ 81,582 ಕುಟುಂಬಗಳಿಗೆ ಇದೇ 27ರಂದು ಹಕ್ಕುಪತ್ರ ವಿತರಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಜಿಲ್ಲಾಧಿಕಾರಿಗಳ ಜೊತೆ ಗುರುವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 11 ಗಂಟೆಗೆ 23 ಜಿಲ್ಲೆಗಳ ಫಲಾನುಭವಿಗಳಿಗೆ ಹಕ್ಕುಪತ್ರ‌ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

‌‘ಅಂದು ಚಿಕ್ಕಬಳ್ಳಾಪುರದಲ್ಲಿ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ಮನ್‌ಸುಖ್‌ ಮಾಂಡವೀಯ, ಸಚಿವ ಡಾ. ಸುಧಾಕರ್ ಉಪಸ್ಥಿತರಿರಲಿದ್ದಾರೆ. ಅದೇ ದಿನ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಹಕ್ಕುಪತ್ರ ನೀಡಲಾಗುವುದು. ‘ಈವರೆಗೆ 1,672 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲಾಗಿದೆ. 2,488 ಪ್ರದೇಶಗಳ ಘೋಷಣೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಆ ಮೂಲಕ, 81 ಸಾವಿರಕ್ಕೂ ಹೆಚ್ಚು ಜನರಿಗೆ ಒಂದೇ ದಿನದಲ್ಲಿ ಹಕ್ಕುಪತ್ರ ನೀಡಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.