ರೈಲು
– ಪ್ರಜಾವಾಣಿ ಚಿತ್ರ
ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ– ತಾಳಗುಪ್ಪ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ಸಂಚರಿಸಲಿದೆ.
ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್ಪ್ರೆಸ್ ವಿಶೇಷ ರೈಲು ಅಕ್ಟೋಬರ್ 17 ಮತ್ತು 24ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ.
ಮತ್ತೊಂದು ಕಡೆಯಿಂದ ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು ಅಕ್ಟೋಬರ್ 18 ಮತ್ತು 25 ರಂದು ತಾಳಗುಪ್ಪದಿಂದ ಬೆಳಿಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.
ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ, ಆನಂದಪುರ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲ್ಲಲಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.