ADVERTISEMENT

ಡಿ.ಜೆ.ಹಳ್ಳಿ: ನಾಮಫಲಕದಲ್ಲಿದ್ದ ಅಖಂಡ ಶ್ರೀನಿವಾಸಮೂರ್ತಿ ಹೆಸರಿಗೆ ಮಸಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 20:42 IST
Last Updated 19 ಆಗಸ್ಟ್ 2020, 20:42 IST
ನಾಮಫಲಕಕ್ಕೆ ಮಸಿ ಬಳಿದಿರುವುದು.
ನಾಮಫಲಕಕ್ಕೆ ಮಸಿ ಬಳಿದಿರುವುದು.   

ಬೆಂಗಳೂರು: ಗಲಭೆ ವೇಳೆ ರಸ್ತೆಯ ನಾಮಫಲಕದಲ್ಲಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೆಸರಿಗೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ.

ಡಿ.ಜೆ.ಹಳ್ಳಿ ಠಾಣೆ ಸಮೀಪದ ಶ್ಯಾಂಪುರ ಮುಖ್ಯರಸ್ತೆಯ ಶಿವರಾಜ್ ರಸ್ತೆ, ಟಿ.ಪಿ.ಕುಪ್ಪನ್ ರಸ್ತೆಗಳಲ್ಲಿರುವ ನಾಮಫಲಕಗಳಿಗೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದಾರೆ.

ಶಾಸಕರ ಮೇಲಿನ ದ್ವೇಷದಿಂದ ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಸ್ಥಳದ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.