ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಸಂಬಂಧ ಪಾಲಿಕೆ ಸದಸ್ಯರಾದ ಸಂಪತ್ ರಾಜ್ ಹಾಗೂ ಜಾಕಿರ್, ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.
ಸೋಮವಾರವಷ್ಟೇ ಇಬ್ಬರಿಗೂ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಮಂಗಳವಾರ ಬೆಳಿಗ್ಗೆಯೇ ಇಬ್ಬರು ತಮ್ಮ ವಕೀಲರ ಸಮೇತ ವಿಚಾರಣೆಗೆ ಬಂದಿದ್ದಾರೆ.
ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಡಿಸಿಪಿ ರವಿಕುಮಾರ್ ಕಚೇರಿಯಲ್ಲಿ ಇದ್ದಾರೆ. ಪ್ರಕರಣದ ತನಿಖಾಧಿಕಾರಿ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ವಿಚಾರಣೆ ನಡೆಯುತ್ತಿದೆ.
ಶಾಸಕರ ಮನೆ ಹಾಗೂ ಠಾಣೆ ಮೇಲೆ ನಡೆದ ದಾಳಿ ಮತ್ತು ಗಲಭೆ ಹಿಂದೆ ರಾಜಕೀಯ ಉದ್ದೇಶ ಇರುವ ಅನುಮಾನ ಸಿಸಿಬಿಗೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.