ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಸಂಬಂಧ ಪಾಲಿಕೆ ಸದಸ್ಯರಾದ ಸಂಪತ್ ರಾಜ್ ಹಾಗೂ ಜಾಕಿರ್, ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.
ಸೋಮವಾರವಷ್ಟೇ ಇಬ್ಬರಿಗೂ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಮಂಗಳವಾರ ಬೆಳಿಗ್ಗೆಯೇ ಇಬ್ಬರು ತಮ್ಮ ವಕೀಲರ ಸಮೇತ ವಿಚಾರಣೆಗೆ ಬಂದಿದ್ದಾರೆ.
ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ, ಡಿಸಿಪಿ ರವಿಕುಮಾರ್ ಕಚೇರಿಯಲ್ಲಿ ಇದ್ದಾರೆ. ಪ್ರಕರಣದ ತನಿಖಾಧಿಕಾರಿ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ವಿಚಾರಣೆ ನಡೆಯುತ್ತಿದೆ.
ಶಾಸಕರ ಮನೆ ಹಾಗೂ ಠಾಣೆ ಮೇಲೆ ನಡೆದ ದಾಳಿ ಮತ್ತು ಗಲಭೆ ಹಿಂದೆ ರಾಜಕೀಯ ಉದ್ದೇಶ ಇರುವ ಅನುಮಾನ ಸಿಸಿಬಿಗೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.