ADVERTISEMENT

ಡಿ.ಜೆ. ಹಳ್ಳಿ ಗಲಭೆ; ಮತ್ತೊಬ್ಬನ ಬಂಧನ‍

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 22:36 IST
Last Updated 21 ಸೆಪ್ಟೆಂಬರ್ 2021, 22:36 IST
   

ಬೆಂಗಳೂರು: ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಮತ್ತೊಬ್ಬ ಆರೋಪಿ ತಬ್ರೀಜ್‌ನನ್ನು (35) ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

2020ರ ಆಗಸ್ಟ್ 12ರಂದು ರಾತ್ರಿ ಗಲಭೆ ನಡೆದಿತ್ತು. ಡಿ.ಜೆ.ಹಳ್ಳಿ ಠಾಣೆ ಕಟ್ಟಡ, ಪೊಲೀಸ್ ವಾಹನಗಳಿಗೆ ಆರೋಪಿಗಳು ಬೆಂಕಿ ಹಚ್ಚಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ತಬ್ರೇಜ್, ಕೃತ್ಯದ ನಂತರ ಪರಾರಿಯಾಗಿದ್ದ. ತಲೆಮರೆಸಿಕೊಂಡು ಓಡಾಡುತ್ತಿದ್ದ. ಪ್ರಕರಣದ ತನಿಖೆ ನಡೆಸುತ್ತಿದ್ದ ಎನ್‌ಐಎ, 109 ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT