ADVERTISEMENT

ಡಿ.ಜೆ ಹಳ್ಳಿ ಗಲಭೆ: ಬಂಧಿತರ ಮಾಹಿತಿ ಬಹಿರಂಗಕ್ಕೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 20:22 IST
Last Updated 2 ಸೆಪ್ಟೆಂಬರ್ 2020, 20:22 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಡಿ.ಜೆ ಹಳ್ಳಿ ಗಲಭೆ ಸಂಬಂಧ ಬಂಧಿತರಾಗಿರುವ ಎಲ್ಲರ ಮಾಹಿತಿಯನ್ನು ಸಿಆರ್‌ಪಿಸಿ ಸೆಕ್ಷನ್ 41–ಸಿ ಅನ್ವಯ ಬಹಿರಂಗಪಡಿಸಬೇಕು’ ಎಂದು ಕೋರಿ ಸಲ್ಲಿಕೆಯಾಗಿರುವಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ.

ಜುನೈದ್ ಅಹಮದ್ ಸಲ್ಲಿಸಿದ್ದ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ‘ಸಿಆರ್‌ಪಿಸಿ 41–ಸಿ ಪ್ರಕಾರ, ಬಂಧಿತರು ಮತ್ತು ಬಂಧನ ಕಾರ್ಯಾಚರಣೆ ನಡೆಸಿದ ಪೊಲೀಸರ ವಿವರವನ್ನು ಎಲ್ಲ ಪೊಲೀಸ್ ನಿಯಂತ್ರಣಾ ಕೊಠಡಿಗಳಲ್ಲಿ ಪ್ರದರ್ಶಿಸಬೇಕು’ ಎಂದು ಅರ್ಜಿದಾರರು ಹೇಳಿದ್ದಾರೆ.

‘ಯಾರನ್ನು ಬಂಧಿಸಲಾಗಿದೆ, ಅದಕ್ಕೆ ಕಾರಣ ಏನು ಎಂಬ ಮಾಹಿತಿಯನ್ನು ಎಲ್ಲ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಪ್ರದರ್ಶಿಸಬೇಕು.ಮಾಹಿತಿ ಕಲೆ ಹಾಕಲುನಗರ ಪೊಲೀಸ್ ಕಮಿಷನರ್‌ ಕಚೇರಿಗೆ ಭೇಟಿ ನೀಡಿದ್ದಾಗ ಎಲ್ಲಿಯೂ ಈ ವಿವರ ಕಾಣಿಸಿಲಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

‘ಈ ಸೆಕ್ಷನ್‌ಗೆ ಅನುಗುಣವಾಗಿ ಎಲ್ಲಾ ವಿಧಿ–ವಿಧಾನಗಳನ್ನು ಅನುಸರಿಸಲಾಗಿದೆಯೇ ಎಂಬುದರ ಬಗ್ಗೆ ಸೆ.11ರಂದು ವಿವರ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ಪೀಠ ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.