ಬೆಂಗಳೂರು: ಕೊರೊನಾ ಸೋಂಕು ಹಬ್ಬುತ್ತಿರುವ ವಿಷಮ ಪರಿಸ್ಥಿತಿ ಎದುರಿಸಲು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳಸಭೆಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದಾರೆ. ‘ಬಹು ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಸರ್ವಪಕ್ಷಸಭೆಕರೆಯಬೇಕು. ಈ ಸಂಕಷ್ಟ ಎದುರಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದೆ. ತಡವಾಗಿಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಪಿಸಿಸಿ ವಿಷನ್ ಕರ್ನಾಟಕ ರಚನೆ
ಲಾಕ್ಡೌನ್ನಿಂದ ಆಗಿರುವ ಆರ್ಥಿಕ ಸಂಕಷ್ಟ ಎದುರಿಸುವ ಬಗ್ಗೆ ರೂಪರೇಷೆಗಳನ್ನು ಸಿದ್ಧಪಡಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ‘ವಿಷನ್ ಕರ್ನಾಟಕ’ ಸಮಿತಿ ರಚಿಸಿದ್ದಾರೆ. ಈ ಸಮಿತಿಗೆ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಸಂಚಾಲಕರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.