ADVERTISEMENT

ರೈಲಿಗೆ ತಲೆಕೊಟ್ಟು ವೈದ್ಯ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 15:23 IST
Last Updated 18 ಏಪ್ರಿಲ್ 2024, 15:23 IST
ಅನಂತ್‌ ಪ್ರಸಾದ್‌
ಅನಂತ್‌ ಪ್ರಸಾದ್‌   

ಬೆಂಗಳೂರು: ಯಲಹಂಕ ರೈಲು ನಿಲ್ದಾಣದ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವೈದ್ಯರೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‌

ಅನಂತ್ ಪ್ರಸಾದ್ (38) ಆತ್ಮಹತ್ಯೆ ಮಾಡಿಕೊಂಡ ವೈದ್ಯ.

‘ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಅನಂತ್‌ ಪ್ರಸಾದ್ ಅವರು ‘ಬೆಂಗಳೂರು ನಾರ್ಥ್‌ ಆಸ್ಪತ್ರೆ’ಯಲ್ಲಿ ಮಕ್ಕಳ ತಜ್ಞರಾಗಿ ಕೆಲಸ ಮಾಡುತ್ತಿದ್ದರು. ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದು, ಪತ್ನಿ ಜತೆ ಹೆಬ್ಬಾಳ ಬಳಿಯ ಕೆಂಪಾಪುರದಲ್ಲಿ ವಾಸವಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಬುಧವಾರ ಸಂಜೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿರುವ ಡೆತ್‌ನೋಟ್‌ ಅವರ ಪ್ಯಾಂಟಿನ ಜೇಬಿನಲ್ಲಿ ಸಿಕ್ಕಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ’ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.