ADVERTISEMENT

ಮದುವೆಯಾದ ತಿಂಗಳಿನಲ್ಲೇ ಕನ್ಯತ್ವ ಪರೀಕ್ಷೆ; ಠಾಣೆ ಮೆಟ್ಟಿಲೇರಿದ ಮಹಿಳೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 20:50 IST
Last Updated 24 ಜುಲೈ 2020, 20:50 IST

ಬೆಂಗಳೂರು: ‘ಮದುವೆಯಾಗಿ ತಿಂಗಳಾಗಿದೆ. ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಪತಿ, ಕನ್ಯತ್ವ ಪರೀಕ್ಷೆ ಮಾಡಿಸುವಂತೆ ಪೀಡಿಸುತ್ತಿದ್ದಾರೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಬಂಡೆಪಾಳ್ಯ ಠಾಣೆಗೆ ದೂರು ನೀಡಿದ್ದಾರೆ.

‘ಮಹಿಳೆ ನೀಡಿರುವ ದೂರು ಆಧರಿಸಿ, ಪತಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ಥಳೀಯ ನಿವಾಸಿಯಾದ ಮಹಿಳೆಯನ್ನು ತಿಂಗಳ ಹಿಂದಷ್ಟೇ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾಗಿ ಒಂದೇ ತಿಂಗಳಿನಲ್ಲೇ ಪತಿ, ಕನ್ಯತ್ವ ಪರೀಕ್ಷೆ ಮಾಡಿಸುವಂತೆ ಪೀಡಿಸುತ್ತಿದ್ದಾರೆ. ಇದಕ್ಕೆ ಕುಟುಂಬಸ್ಥರು ಸಹಕಾರ ನೀಡುತ್ತಿದ್ದಾರೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.