ADVERTISEMENT

ಜೋಡಿ ಕೊಲೆ ಪ್ರಕರಣ: ಆರೋಪಿಗೆ ಗುಂಡು ಹಾರಿಸಿ ಬಂಧನ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 21:44 IST
Last Updated 14 ಏಪ್ರಿಲ್ 2021, 21:44 IST

ಬೆಂಗಳೂರು: ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಮಂಜುನಾಥ್‌ನನ್ನು ಪೊಲೀಸರು ಗುಂಡು ಹಾರಿಸಿ ಬುಧವಾರ ಬಂಧಿಸಿದ್ದಾರೆ.

‘ಪ್ರಕರಣ ಸಂಬಂಧ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿದ್ದ ಆರೋಪಿಯನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಮಂಜುನಾಥ್ ಹಲ್ಲೆಗೆ ಮುಂದಾಗಿದ್ದ. ಶರಣಾಗಲು ಸೂಚಿಸಿದರೂ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ.ಈ ವೇಳೆ ಇನ್‌ಸ್ಪೆಕ್ಟರ್ ಕಿಶೋರ್‌ ಆರೋಪಿ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದರು. ಆರೋಪಿ ವಿರುದ್ಧ ಹಲವು ಪ್ರಕರಣಗಳು ಇವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏ.8ರಂದು ಮಮತಾ ಬಸು (75) ಹಾಗೂ ಅವರ ಮಗನ ಸ್ನೇಹಿತ ದೇವಬ್ರತ್ (41) ಎಂಬುವರ ಕೊಲೆಯಾಗಿತ್ತು. ಮನೆಗೆ ನುಗ್ಗಿದ್ದ ಆರೋಪಿ,ಇಬ್ಬರನ್ನೂ ಹತ್ಯೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಸಮೇತ ಪರಾರಿಯಾಗಿದ್ದ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.