ADVERTISEMENT

‘ಡಾ.ರಾಜ್‌ ಸಂಸ್ಕೃತಿ ಪ್ರಶಸ್ತಿಗೆ ಜಯಂತಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 20:10 IST
Last Updated 15 ಮಾರ್ಚ್ 2019, 20:10 IST
ಜಯಂತಿ
ಜಯಂತಿ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ 2019ನೇ ಸಾಲಿನ ‘ಡಾ.ರಾಜ್‌ಕುಮಾರ್‌ ಸಂಸ್ಕೃತಿ ಪ್ರಶಸ್ತಿ’ಗೆ ಹಿರಿಯ ನಟಿ ಡಾ.ಜಯಂತಿ ಅವರನ್ನುಶುಕ್ರವಾರ ಆಯ್ಕೆ ಮಾಡಲಾಗಿದೆ.

ಕಸಾಪ ಅಧ್ಯಕ್ಷ ಮನು ಬಳಿಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ ಹಾಗೂ ಕಸಾಪ ಪದಾಧಿಕಾರಿಗಳು ಇದ್ದರು.

‘ಈ ಪ್ರಶಸ್ತಿ ₹ 30 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಸಿನೆಮಾ ಕ್ಷೇತ್ರದ ಸಾಧಕರನ್ನು ಹಾಗೂ ಸಾಹಿತಿಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಕಸಾಪ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.