ಬೆಂಗಳೂರು: ಲುಂಬಿನಿ ಉದ್ಯಾನದಲ್ಲಿದ್ದ ನಟ ರಾಜ್ಕುಮಾರ್ ಅವರ ಕಂಚಿನ ಪುತ್ಥಳಿ ಕಳ್ಳತನವಾಗಿದ್ದು, ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪುತ್ಥಳಿ ಕಳ್ಳತನ ಬಗ್ಗೆ ಅರಣ್ಯ ಅಧಿಕಾರಿ ಯೋಗೇಶ್ ಎಂಬುವರು ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಳ್ಳತನ ಆರೋಪದಡಿ ಇಬ್ಬರನ್ನುವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಲುಂಬಿನಿ ಉದ್ಯಾನವನ್ನು ಅರಣ್ಯ ಇಲಾಖೆ ನಿರ್ವಹಣೆ ಮಾಡುತ್ತಿದೆ. ರಾಜ್ಕುಮಾರ್ ನೆನಪಿಗಾಗಿ ಕೆಲ ತಿಂಗಳ ಹಿಂದೆ ಕಂಚಿನ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಜ. 24ರಂದು ಯಾರೋ ದುಷ್ಕರ್ಮಿಗಳು, ಪುತ್ಥಳಿ ಕದ್ದುಕೊಂಡು ಹೋಗಿರುವುದಾಗಿ ಅರಣ್ಯ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ‘ ಎಂದೂ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.