ADVERTISEMENT

‘ಡಿಸೈನ್ ಬಯೋಸಿಸ್‌’ಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2019, 2:09 IST
Last Updated 22 ನವೆಂಬರ್ 2019, 2:09 IST
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಡಾ. ಧನಂಜಯ ಅವರು ಪ್ರಶಸ್ತಿ ಸ್ವೀಕರಿಸಿದರು
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಡಾ. ಧನಂಜಯ ಅವರು ಪ್ರಶಸ್ತಿ ಸ್ವೀಕರಿಸಿದರು   

ಬೆಂಗಳೂರು: ರಾಜ್ಯದ ಸಾವಯವ ಕೃಷಿ ಕಂಪನಿ ಡಿಸೈನ್ ಬಯೋಸಿಸ್‌, ದೆಹಲಿಯ ಭಾರತದ ಆರ್ಥಿಕ ಅಭಿವೃದ್ಧಿ ಹಾಗೂ ಸಂಶೋಧನಾ ಸಂಘವು (ಐಇಆರ್‌ಡಿಎ) ನೀಡುವ ದೇಶದ ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಮುಖ ಕಂಪನಿ ಪ್ರಶಸ್ತಿಗೆ ಭಾಜನವಾಗಿದೆ.

ಕಂಪನಿಯ ಸಂಸ್ಥಾಪಕ ನಿರ್ದೇಶಕ ಡಾ.ಧನಂಜಯ ನಾಯ್ಕ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಕಂಪನಿಯ ಹಾಗೂ ನಿರ್ದೇಶಕರ 10 ವರ್ಷಗಳ ಸಾಧನೆ, ರೈತರಿಗೆ ನೀಡಿದ ಸೇವೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.