ADVERTISEMENT

25ರಂದು ದಲಿತ ಸಮಾವೇಶ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 19:38 IST
Last Updated 13 ಫೆಬ್ರುವರಿ 2019, 19:38 IST

ಬೆಂಗಳೂರು: ದಲಿತ ಸಂಘಟನೆಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇದೇ 25ರಂದು ದಲಿತ ಸಮಾವೇಶವನ್ನು ಆಯೋಜಿಸಿದೆ.

ಅಂದು ಬೆಳಿಗ್ಗೆ ಟೌನ್‌ ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಬಳಿಕ ಸಮಾವೇಶ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ‘10 ತಿಂಗಳು ಕಳೆದರೂ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗಗಳಿಗೆ ಅಧ್ಯಕ್ಷರ ನೇಮಕ ಮಾಡಿಲ್ಲ. ಆದ್ದರಿಂದ ದೂರುಗಳು ವಿಲೇವಾರಿಯಾಗದೆ ಉಳಿದಿವೆ.

ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಸರ್ಕಾರ ದಲಿತ ವಿರೋಧಿಯಾಗಿ ವರ್ತಿಸುತ್ತಿದೆ’ ಎಂದು ಆರೋಪಿಸಿದರು. ‘ಉಪಜಾತಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು. ಯೋಜನೆಗಳಡಿ ಫಲಾನುಭವಿಗಳ ಆಯ್ಕೆಗಿರುವ ಶಾಸಕರಅಧ್ಯಕ್ಷತೆಯ ಸಮಿತಿ ರದ್ದುಪಡಿಸಬೇಕು. 500 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕರನ್ನು ನೇಮಿಸಬೇಕು ಎನ್ನುವುದು ಬೇಡಿಕೆಗಳಾಗಿವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.