ADVERTISEMENT

ಕಾಂಗ್ರೆಸ್‌ನಲ್ಲಿ ಕುರ್ಚಿಗೆ ಕಿತ್ತಾಟ: ಡಿವಿಎಸ್‌

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 4:44 IST
Last Updated 8 ಫೆಬ್ರುವರಿ 2023, 4:44 IST
ಸಂಸದ ಡಿ.ವಿ. ಸದಾನಂದಗೌಡ, ಅಬಕಾರಿ ಸಚಿವ ಕೆ. ಗೋಪಾಲಯ್ಯ ಸಮ್ಮುಖದಲ್ಲಿ ಸೋಮಶೆಟ್ಟಿಹಳ್ಳಿ ಹಾಗೂ ಚಿಕ್ಕಬಾಣವಾರದ ಕಾರ್ಯಕರ್ತರು ಬಿಜೆಪಿ ಸೇರಿದರು
ಸಂಸದ ಡಿ.ವಿ. ಸದಾನಂದಗೌಡ, ಅಬಕಾರಿ ಸಚಿವ ಕೆ. ಗೋಪಾಲಯ್ಯ ಸಮ್ಮುಖದಲ್ಲಿ ಸೋಮಶೆಟ್ಟಿಹಳ್ಳಿ ಹಾಗೂ ಚಿಕ್ಕಬಾಣವಾರದ ಕಾರ್ಯಕರ್ತರು ಬಿಜೆಪಿ ಸೇರಿದರು   

ಪೀಣ್ಯ ದಾಸರಹಳ್ಳಿ: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆಯೇ ಹೊರತು ರಾಜ್ಯದ ಅಭಿವೃದ್ಧಿ ವಿಚಾರಕ್ಕೆ ಅಲ್ಲ. ಜೆಡಿಎಸ್‌ನಲ್ಲಿ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ಮನೆಯಲ್ಲೇ ಜಗಳ ಇದೆ ಎಂದು ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು.

ಚಿಕ್ಕಬಾಣಾವರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಸಚಿವ ಕೆ.ಗೋಪಾಲಯ್ಯ, ‘ಈ ಬಾರಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದೇವೆ’ ಎಂದರು.

ADVERTISEMENT

ಮಾಜಿ ಶಾಸಕ ಎಸ್. ಮುನಿರಾಜು, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.