
ಪ್ರಜಾವಾಣಿ ವಾರ್ತೆ
ತುಮಕೂರಿನಲ್ಲಿ ‘ಪ್ರಜಾವಾಣಿ’ ದಿನ ಪತ್ರಿಕೆ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ವಿತರಕರಿಗಾಗಿ ಇ-ಶ್ರಮ್ ಯೋಜನೆಯ ನೋಂದಣಿ ಶಿಬಿರ ಏರ್ಪಡಿಸಲಾಗಿತ್ತು
ಬೆಂಗಳೂರು: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ವತಿಯಿಂದ ಫೆ.1ರಂದು ಪತ್ರಿಕಾ ಏಜೆಂಟರು ಮತ್ತು ವಿತರಕರಿಗೆ ‘ಇ–ಶ್ರಮ್’ ಯೋಜನೆಗೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಂ.ಜಿ.ರಸ್ತೆಯಲ್ಲಿರುವ ‘ಪ್ರಜಾವಾಣಿ’ ಕೇಂದ್ರ ಕಚೇರಿಯಲ್ಲಿ ಅಂದು ಸಂಜೆ 4ರಿಂದ 5ರ ವರೆಗೆ ನೋಂದಣಿ ನಡೆಯಲಿದೆ.
ನೋಂದಣಿ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹಾಗೂ ಕಾರ್ಮಿಕ ಇಲಾಖೆ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನೋಂದಣಿಗೆ ಆಸಕ್ತಿಯುಳ್ಳವರು ಮೊಬೈಲ್: 94481 59346 ಹಾಗೂ 97399 97923 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.