ADVERTISEMENT

ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಹೊಸ ನೀತಿ ಪೂರಕ

​ಪ್ರಜಾವಾಣಿ ವಾರ್ತೆ
Published 17 ಜುಲೈ 2019, 19:51 IST
Last Updated 17 ಜುಲೈ 2019, 19:51 IST

ಬೆಂಗಳೂರು: ಕೇಂದ್ರ ಸರ್ಕಾರದ ಮುಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್. ದೊರೆಸ್ವಾಮಿ ಹೇಳಿದರು.

ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಶಿಕ್ಷಕ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇದು ಅನುಕೂಲಕರವಾಗಿದೆ’ ಎಂದರು.

ಜಗತ್ತಿನಲ್ಲಿ ಅತ್ಯಂತ ಗೌರವಿಸಲ್ಪಡುವ ಉದ್ಯೋಗ ಎಂದರೆಶಿಕ್ಷಕ ವೃತ್ತಿ. ಆದರ್ಶ ಶಿಕ್ಷಕರಿಂದಲೇ ದೊಡ್ಡದೊಡ್ಡ ವಿಶ್ವವಿದ್ಯಾಲಯ ಮತ್ತು ಶಿಕ್ಷಣ ಸಂಸ್ಥೆಗಳು ರೂಪುಗೊಂಡಿವೆ. ರೋಗಿಯಯಾತನೆ ಪರಿಹರಿಸುವ ಜತೆಗೆ ಜೀವವನ್ನೂ ಉಳಿಸುವ ಶಕ್ತಿ ವೈದ್ಯರಿಗೆ ಇದೆ. ಹೀಗಾಗಿ ಈ ಎರಡೂ ವೃತ್ತಿಗಳು ಗೌರವಕ್ಕೆ ಪಾತ್ರವಾದವು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.