ADVERTISEMENT

ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​: ಸುನಿಲ್​ ಕುಮಾರ್

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 20:14 IST
Last Updated 5 ಜೂನ್ 2022, 20:14 IST

ಬೆಂಗಳೂರು: ಪ್ರತಿ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಸಬೇಕೆಂದು ಇಂಧನ ಸಚಿವ ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ನೀಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿ ಎಲ್ಲ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಬೇಕು ಎಂದಿದ್ದಾರೆ

ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನ ವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕ ರಿಗೆ ಕಳುಹಿಸಬೇಕು ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.