ADVERTISEMENT

ಆನೆ ದಾಳಿ: ಗಾಯಾಳು ಸಾವು

​ಪ್ರಜಾವಾಣಿ ವಾರ್ತೆ
Published 26 ಜುಲೈ 2019, 20:10 IST
Last Updated 26 ಜುಲೈ 2019, 20:10 IST

ಕನಕಪುರ: ಕೆಂಚೇಗೌಡನದೊಡ್ಡಿಯಲ್ಲಿ ಕಾಡಾನೆ ತುಳಿತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಂಗರಾಜು (45) ಗುರುವಾರ ಮೃತಪಟ್ಟಿದ್ದಾರೆ.

ಒಂದು ವಾರದ ಹಿಂದೆ ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಒಂಟಿ ಸಲಗ ದಾಳಿ ಮಾಡಿತ್ತು. ಅವರ ಚೀರಾಟ ಕೇಳಿ ಗ್ರಾಮಸ್ಥರು ಸಹಾಯಕ್ಕೆ ಧಾವಿಸಿ ರಕ್ಷಣೆ ಮಾಡಿದ್ದರು. ಆನೆ ದಂತದಿಂದ ತಿವಿದು ಗಾಯಗೊಳಿಸಿತ್ತು. ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT