ಬೆಂಗಳೂರು: ಈಜೀಪುರ ಸಿಗ್ನಲ್ನಿಂದ ಕೇಂದ್ರೀಯ ಸದನ ಜಂಕ್ಷನ್ ತನಕದಎಲಿವೇಟೆಡ್ ಕಾರಿಡಾರ್ ಕಾಮಗಾರಿತ್ವರಿತವಾಗಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಮೇಯರ್ಗಂಗಾಂಬಿಕೆ ಸೂಚನೆ ನೀಡಿದರು.
ಕೊರಮಂಗಲದ ಸೋನಿ ವರ್ಲ್ಡ್ ಜಂಕ್ಷನ್ ಬಳಿ ಶನಿವಾರ ಕಾಮಗಾರಿ ಪರಿಶೀಲನೆ ನಡೆಸಿದರು.
‘2.5 ಕಿ.ಮೀ ಉದ್ದದ ಮೇಲ್ಸೇತುವೆಯನ್ನು ₹214 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 81 ಪಿಲ್ಲರ್ಗಳ ನಿರ್ಮಾಣ ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದ್ದು, ಮೇಲ್ಸೇತುವೆಯಲ್ಲಿ 7 ಜಂಕ್ಷನ್ಗಳು, 4 ರ್ಯಾಂಪ್, ರಸ್ತೆಯ ಎರಡು ಬದಿ ತಲಾ ಎರಡು ಪಥಗಳುಬರಲಿವೆ. 2020ರ ಸೆಪ್ಟೆಂಬರ್ ವೇಳೆಗೆ ಕಾಮಗಾರಿ ಮುಗಿಯಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.