ADVERTISEMENT

9 ಎಕರೆ 38 ಗುಂಟೆ ಸರ್ಕಾರಿ ಜಾಗದ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 19:45 IST
Last Updated 29 ಜನವರಿ 2022, 19:45 IST

ಬೆಂಗಳೂರು: ನಗರದ ಐದು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ಒಟ್ಟು 9 ಎಕರೆ 38 ಗುಂಟೆ ಜಾಗವನ್ನುಜಿಲ್ಲಾಡಳಿತ ಶನಿವಾರ ಮತ್ತೆ ಸರ್ಕಾರದ ವಶಕ್ಕೆ ಪಡೆದಿದೆ. ಇದರ ಮೌಲ್ಯ₹ 13.52 ಕೋಟಿ ಎಂದು ಅಂದಾಜಿಸಲಾಗಿದೆ.

ನಗರ ಜಿಲ್ಲಾಡಳಿತದ ಅಧಿಕಾರಿಗಳು ಜಿಲ್ಲಾಧಿಕಾರಿ ಜೆ. ಮಂಜುನಾಥ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಕೈಗೊಂಡರು. ಕೆರೆ, ಗೋಮಾಳ, ಸ್ಮಶಾನ, ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಿ ಸರ್ಕಾರದ ಸ್ವಾಧೀನಕ್ಕೆ ಪಡೆದರು.

ಎಂಟು ಕೆರೆಗಳ ಜಾಗವನ್ನು ಕೆಲವರು ಒತ್ತುವರಿ ಮಾಡಿದ್ದರು. ಅವುಗಳನ್ನು ತೆರವುಗೊಳಿಸಲಾಯಿತು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

ADVERTISEMENT

ಯಲಹಂಕ ಮತ್ತು ಆನೇಕಲ್ ತಾಲ್ಲೂಕುಗಳಲ್ಲಿ ಒತ್ತುವರಿಯಾಗಿದ್ದ 33 ಗುಂಟೆ ಸರ್ಕಾರಿ ಗೋಮಾಳ, ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ 24 ಗುಂಟೆ ಗುಂಡು ತೋಪು ಮತ್ತು ಪೂರ್ವ ತಾಲ್ಲೂಕಿನಲ್ಲಿ 1 ಎಕರೆ ಸರ್ಕಾರಿ ಬೀಳು ಹಾಗೂ ಬೆಂಗಳೂರು ಪೂರ್ವ ಮತ್ತು ಆನೇಕಲ್ ತಾಲೂಕುಗಳಲ್ಲಿ 26 ಗುಂಟೆ ಸ್ಮಶಾನ ಜಾಗದಲ್ಲಿ ಒತ್ತುವರಿಯನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ ಎಂದು ಅವರು ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.