ADVERTISEMENT

ಯಾರ ಭಾವನೆ ಮೇಲೂ ಹೊಡೆಯಬಾರದು- ಎನ್.ಸಂತೋಷ್ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2022, 3:02 IST
Last Updated 25 ಮಾರ್ಚ್ 2022, 3:02 IST
ಕಲಾ ಉತ್ಸವವನ್ನು ಎನ್.ಸಂತೋಷ್‍ ಹೆಗ್ಡೆ ಉದ್ಘಾಟಿಸಿದರು. ಟ್ರಸ್ಟ್‌ನ ಅಧ್ಯಕ್ಷ ಟಿ.ರಾಮಕೃಷ್ಣಪ್ಪ, ಕಾರ್ಯದರ್ಶಿ ಎನ್.ಜ್ಯೋತಿ, ಹೊಯ್ಸಳ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ವಿ.ಗೌರಿಶಂಕರ್ ಇದ್ದರು
ಕಲಾ ಉತ್ಸವವನ್ನು ಎನ್.ಸಂತೋಷ್‍ ಹೆಗ್ಡೆ ಉದ್ಘಾಟಿಸಿದರು. ಟ್ರಸ್ಟ್‌ನ ಅಧ್ಯಕ್ಷ ಟಿ.ರಾಮಕೃಷ್ಣಪ್ಪ, ಕಾರ್ಯದರ್ಶಿ ಎನ್.ಜ್ಯೋತಿ, ಹೊಯ್ಸಳ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ವಿ.ಗೌರಿಶಂಕರ್ ಇದ್ದರು   

ನೆಲಮಂಗಲ: ‘ಧರ್ಮ ಮತ್ತು ಭಾಷೆಯನ್ನು ಎಲ್ಲಿ ಬಳಕೆ ಮಾಡಬೇಕೊ ಅಲ್ಲಿ ಬಳಕೆ ಮಾಡಬೇಕು. ಪ್ರತಿಯೊಬ್ಬರು ಅವರ ಧರ್ಮವನ್ನು ನಂಬಿದ್ದಾರೆ. ಅವರ ಭಾವನೆ ಮೇಲೆ ಹೊಡೆಯುವ ಕೆಲಸ ಮಾಡಬಾರದು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

ಹೊಯ್ಸಳ ಪದವಿ ಪೂರ್ವ ಕಾಲೇಜಿನಿಂದ ಆಯೋಜಿಸಿದ್ದ ಸಮಾಲೋಚನಾ ಸಮಾರಂಭ ಹಾಗೂ ಕಲಾ ಉತ್ಸವ ಉದ್ಘಾಟಿಸಿ ಮಾತನಾಡಿದರು.

‘ಸಮಾಜ ತನ್ನ ಭಾವನೆಗಳನ್ನ ಬದಲಾಯಿಸಬೇಕು. ಹಿಜಾಬ್ ವಿಚಾರವಾಗಿ ಕೋರ್ಟ್‌ ತೀರ್ಪು ನೀಡಿದ್ದು, ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಬಹುದು. ಅದನ್ನು ಬಿಟ್ಟು ಬಂದ್ ಮಾಡುವುದು ಸರಿಯಲ್ಲ. ನ್ಯಾಯಾಲಯದ ಮಾತಿಗೆ ಪ್ರತಿಯೊಬ್ಬರು ಬೆಲೆ ಕೊಡಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.