ADVERTISEMENT

ಸ್ವಾಮಿ ವಿವೇಕಾನಂದ ಮೆಟ್ರೊ ನಿಲ್ದಾಣದಲ್ಲಿ ಬೆಂಗಳೂರು ಸಂತೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 3:14 IST
Last Updated 18 ಆಗಸ್ಟ್ 2022, 3:14 IST
   

ಬೆಂಗಳೂರು: ನೇರಳೆ ಮಾರ್ಗದಸ್ವಾಮಿ ವಿವೇಕಾನಂದ ಮೆಟ್ರೊ ರೈಲು ನಿಲ್ದಾಣದ ಆವರಣದಲ್ಲಿ ಖಾದಿ ಮತ್ತು ಗುಡಿ ಕೈಗಾರಿಕೆ ಉತ್ಪನ್ನಗಳ ಪ್ರದರ್ಶನ ಒಳಗೊಂಡ ಬೆಂಗಳೂರು ಸಂತೆ ಆಯೋಜನೆಗೊಂಡಿದೆ.

‘ಕಲೆ ಮತ್ತು ಕರಕುಶಲ ವಸ್ತುಗಳು, ಉಡುಪುಗಳು, ಗೃಹಾಲಂಕಾರ ವಸ್ತುಗಳು, ಸಾವಯವ ಉತ್ಪನ್ನಗಳು, ಸಾಂಪ್ರದಾಯಿಕ ಉಡುಪುಗಳು ಲಭ್ಯ ಇವೆ. ಆ.21ರ ತನಕ ಬೆಳಿಗ್ಗೆ 11ರಿಂದ ಸಂಜೆ 7 ಗಂಟೆ ತನಕ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಇದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ’ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT