ADVERTISEMENT

ಸಿನಿಮಾ ಛಾಯಾಚಿತ್ರಗಳ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 21:23 IST
Last Updated 1 ಸೆಪ್ಟೆಂಬರ್ 2022, 21:23 IST
ಹಾಸ್ಯನಟ ನರಸಿಂಹರಾಜು ಅವರು ಡಾ.ರಾಜ್‌ಕುಮಾರ್ ಅವರನ್ನು ತಬ್ಬಿಕೊಂಡಿರುವ ದೃಶ್ಯ. ಪ್ರಗತಿ ಅಶ್ವತ್ಥನಾರಾಯಣ ಅವರು ಸೆರೆಹಿಡಿದಿರುವ ಅಪರೂಪದ ಛಾಯಾಚಿತ್ರ
ಹಾಸ್ಯನಟ ನರಸಿಂಹರಾಜು ಅವರು ಡಾ.ರಾಜ್‌ಕುಮಾರ್ ಅವರನ್ನು ತಬ್ಬಿಕೊಂಡಿರುವ ದೃಶ್ಯ. ಪ್ರಗತಿ ಅಶ್ವತ್ಥನಾರಾಯಣ ಅವರು ಸೆರೆಹಿಡಿದಿರುವ ಅಪರೂಪದ ಛಾಯಾಚಿತ್ರ   

ಬೆಂಗಳೂರು: ಪ್ರಗತಿ ಅಶ್ವತ್ಥನಾರಾಯಣ ತಮ್ಮ ವೃತ್ತಿ ಬದುಕಿನಲ್ಲಿ ಸೆರೆ ಹಿಡಿದಿರುವ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಸೆಪ್ಟೆಂಬರ್ 2ರಿಂದ 4ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ.

ಶುಕ್ರವಾರ (ಸೆ. 2) ಬೆಳಿಗ್ಗೆ 10.30ಕ್ಕೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ. ನಟ ಶ್ರೀನಾಥ್, ಟಿ.ಎಸ್ ನಾಗಾಭರಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು, ಪ್ರಮುಖ ಸಭೆ– ಸಮಾರಂಭಗಳು, ಕನ್ನಡ ಸಾಹಿತಿಗಳು ಮತ್ತು ಹಿಂದಿ ಚಿತ್ರರಂಗದ ಹಿಂದಿನ ತಾರೆಯರ ಕಲಾತ್ಮಕ ಛಾಯಾಚಿತ್ರಗಳ ಪ್ರದರ್ಶನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.